ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಡಿ.ಕೆ.ಶಿ ಒಪ್ಪುತ್ತಾರಾ?-ಸಿ.ಎಂ ಬೊಮ್ಮಾಯಿ
ಚಿಕ್ಕಮಗಳೂರು: ಮುಖ್ಯಮಂತ್ರಿಯಾಗಬೇಕಾದರೆ ಕಾಂಗ್ರೆಸ್ಗೆ ಮತ ಹಾಕುವಂತೆ ಸಿದ್ದರಾಮಯ್ಯ ಜನರನ್ನು ಕೋರಿದ್ದಾರೆ. ಅವರು ಮುಖ್ಯಮಂತ್ರಿಯಾಗಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಪ್ಪುತ್ತಾರಾ ಎಂಬುದನ್ನು ಮೊದಲು ಖಾತ್ರಿಪಡಿಸಲಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ.
![](http://newsbites.in/wp-content/uploads/2022/11/IMG_20221115_184505-1024x633.jpg)
ಪಟ್ಟಣದ ಎಪಿಎಂಸಿ ಪ್ರಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಡಿಕೆಶಿ ಅವರ ಅಭಿಪ್ರಾಯ ಪಡೆಯಲು ಸಾಧ್ಯವಾಗದ ಸಿದ್ದರಾಮಯ್ಯ ಜನರ ಬೆಂಬಲ ಹೇಗೆ ಪಡೆಯಲು ಸಾಧ್ಯ ಎಂದು ಪ್ರಶ್ನಿಸಿದ ಬೊಮ್ಮಾಯಿ
2013ರಲ್ಲಿ ಜನರ ಆಶೀರ್ವಾದ ಪಡೆದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ‘ಭಾಗ್ಯ’ಗಳನ್ನು ಘೋಷಣೆ ಮಾಡಿದರೆ ಹೊರತು ಜನರಿಗೆ ತಲುಪಿಸಲಿಲ್ಲ ಎಂದು ಆರೋಪಿಸಿದರು.