ಕರಾವಳಿ

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಫೋಟೋ ಹಾಕುವುದಾಗಿ ಬೆದರಿಕೆ ಒಡ್ಡಿದ ಪ್ರಕರಣ: ಆರೋಪಿಗೆ ಜಾಮೀನು



ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಮತ್ತೆ ನಿರಾಕರಿಸಿದ್ದನ್ನು ವಿಚಾರಿಸಿದಾಗ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕುವುದಾಗಿ ಯುವತಿಯನ್ನು ಬೆದರಿಸಿದ ಪ್ರಕರಣದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಮಂಗಳೂರು ಕೋಣಾಜೆ ಕಡಂಬಾರ ನಿವಾಸಿ ಶ್ರೀಧರ ಕಡಂಬಾರ ಎಂಬವರ ಪುತ್ರ ಸಂಜಿತ್ ಕುಮಾರ್ ಎಂಬವರು ಪುತ್ತೂರಿನ ಮುಕ್ವೆಯಲ್ಲಿರುವ ದೂರದ ಸಂಬಂಧಿ ಯುವತಿಯೊಂದಿಗೆ ಪ್ರೀತಿಯ ನಾಟಕವಾಡಿ ವಿವಾಹವಾಗುವುದಾಗಿ ನಂಬಿಸಿ ಬಳಿಕ ನಿರಾಕರಿಸಿದ್ದರು.ಈ ಕುರಿತು ಯುವತಿ ವಿಚಾರಿಸಿದಾಗ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕುವುದಾಗಿ ಬೆದರಿಸಿದ್ದಾರೆ ಎಂದು ಆರೋಪಿಸಿ ಯುವತಿ ನೀಡಿದ ದೂರಿನಂತೆ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

ಆರೋಪಿ ಸಂಜಿತ್ ಕುಮಾರ್ ನ್ಯಾಯಾಲಯಕ್ಕೆ ಶರಣಾಗಿದ್ದು ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರೋಪಿ ಪರ ವಕೀಲರಾದ ಮಾಧವ ಪೂಜಾರಿ ಮತ್ತು ಮೋಹಿನಿ ಕೆ ವಾದಿಸಿದ್ದರು.

Leave a Reply

Your email address will not be published. Required fields are marked *

error: Content is protected !!