Uncategorized

ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಮೇಲಕ್ಕೆತ್ತಿ ನೆಲಕ್ಕೆಸೆದ ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯನ್ನು ಮೇಲಕ್ಕೆತ್ತಿ ನೆಲಕ್ಕೆಸೆದ ಪ್ರಕರಣದ ಆರೋಪಿಯ ವಿರುದ್ಧ ಕೊಲೆ ಯತ್ನ ಹಾಗೂ ಪೋಕ್ಸೋ ಕಾಯ್ದೆಯಂತೆ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕುಂಜತ್ತೂರು ಉದ್ಯಾವರದ ಅಬೂಬಕ್ಕರ್ ಸಿದ್ದೀಕ್ (30) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಗುರುವಾರ ಬೆಳಿಗ್ಗೆ ಘಟನೆ ನಡೆದಿತ್ತು. ಮದ್ರಸಕ್ಕೆ ತೆರಳುತ್ತಿದ್ದ ಬಾಲಕಿಯ ಬಳಿಗೆ ಬಂದಿದ್ದ ಸಿದ್ದೀಕ್ ಬಾಲಕಿಯನ್ನು ಮೇಲಕ್ಕೆತ್ತಿ ನೆಲಕ್ಕೆಸೆದಿದ್ದ.


ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ಬಾಲಕಿ ಚೇತರಿಸಿಕೊಂಡಿದ್ದು, ಪೊಲೀಸರು ಬಾಲಕಿಯಿಂದ ಹೇಳಿಕೆ ಪಡೆದಿದ್ದಾರೆ.

ಆರೋಪಿಯನ್ನು ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!