ಕರಾವಳಿರಾಜಕೀಯ

ಸಾಮಾನ್ಯ ಸಭೆಯ ನಿರ್ಣಯಕ್ಕೆ ಸರಕಾರದಿಂದ ದೊರೆಯದ ಸ್ಪಂದನೆ: ಬಿಜೆಪಿ ಬೆಂಬಲಿತ ಗ್ರಾ. ಪಂ ಸದಸ್ಯ ರಾಜೀನಾಮೆ



ಪುತ್ತೂರು: ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯವರ ವರ್ಗಾವಣೆ ಆದೇಶವನ್ನು ಹಿಂಪಡೆಯುವಂತೆ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯ ಕ್ಕೆ ಸರಕಾರ ಬೆಲೆ ಕೊಡದೇ ಇರುವುದರಿಂದ ಮನನೊಂದು ಆರ್ಯಾಪು ಗ್ರಾ.ಪಂ ಬಿಜೆಪಿ ಬೆಂಬಲಿತ ಸದಸ್ಯ ವಸಂತ ಶ್ರೀದುರ್ಗಾ ಎಂಬವರು ತಮ್ಮ ಸದಸ್ಯ ಸ್ಥಾನಕ್ಕೆ ನ.18ರಂದು ಪಂಚಾಯತ್ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಗ್ರಾ.ಪಂ ಪಿಡಿಓ ನಾಗೇಶ್ ಎಂ.ರವರ ವರ್ಗಾವಣೆಯ ಆದೇಶವನ್ನು ಹಿಂಪಡೆಯುವಂತೆ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡು ಮುಖ್ಯಮಂತ್ರಿ, ಗ್ರಾಮೀಣಾಭಿವೃದ್ಧಿ ಸಚಿವರು, ಶಾಸಕರಿಗೆ ಮನವಿ ಸಲ್ಲಿಸಿದ್ದರೂ ಪಂಚಾಯತ್ ನ ಸಾಮಾನ್ಯ ಸಭೆಯ ನಿರ್ಣಯಕ್ಕೆ ಬೆಲೆ ದೊರೆಯಲಿಲ್ಲ. ಹೀಗಾಗಿ ರಾಜೀನಾಮೆ ಸಲ್ಲಿಸಿರುವುದಾಗಿ ವಸಂತರವರು ತಿಳಿಸಿದ್ದಾರೆ.


ವಸಂತ ಶ್ರೀದುರ್ಗ ಅವರು ಈ ಹಿಂದೆ ಆರ್ಯಾಪು ಗ್ರಾ.ಪಂ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

error: Content is protected !!