ರಾಜ್ಯ

ಬೆಂಗಳೂರು:ಖಾಸಗಿ ಬಸ್ ಪಲ್ಟಿ 30 ಮಂದಿಗೆ ಗಾಯ



ಖಾಸಗಿ ಬಸ್ ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಮಿಟಗಾನಹಳ್ಳಿ ಬಳಿ ನಡೆದಿದೆ.

ಕೆಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೆಲವರಿಗೆ ಬೆನ್ನು ಮೂಳೆ, ಕೈ ಕಾಲುಗಳಿಗೆ ನೋವು ಸಂಭವಿಸಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.


ಹಿಂದೂಪುರದಿಂದ ನಿನ್ನೆ ರಾತ್ರಿ ತಿರುಪತಿಗೆ ತೆರಳುತ್ತಿದ್ದ ಭಾರತಿ ಖಾಸಗಿ ಬಸ್ ಇದಾಗಿದ್ದು, ಬಸ್‌ನಲ್ಲಿ 45 ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು.
ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿ ಉರುಳಿಬಿದ್ದಿದೆ ಎಂಬ ಆರೋಪ ಕೇಳಿಬಂದಿದೆ.
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!