ಕರಾವಳಿ

ಮಂಗಳೂರು ಆಟೋ ಸ್ಫೋಟ ಪ್ರಕರಣ: ಆಟೋದಲ್ಲಿ ಪತ್ತೆಯಾದ ಆಧಾರ್ ಕಾರ್ಡ್ ಬಗ್ಗೆ ಸ್ಪಷ್ಟನೆ ನೀಡಿದ ವ್ಯಕ್ತಿ



ಮಂಗಳೂರು: ಮಂಗಳೂರು ಆಟೋ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಆಟೋ ಸ್ಪೋಟದ ವೇಳೆ ಸಿಕ್ಕಿದ ಪ್ರಯಾಣಿಕನದು ಎನ್ನಲಾದ ಆಧಾರ್ ಕಾರ್ಡ್ ಕೂಡ ನಕಲಿಯಾಗಿದ್ದು, ಇದು ತುಮಕೂರಿನಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿಯ ಹೆಸರಲ್ಲಿದೆ ಎಂದು ತಿಳಿದು ಬಂದಿದೆ.

ತುಮಕೂರಿನಲ್ಲಿ ರೈಲ್ವೆ ಟ್ರ್ಯಾಕ್ ಮೈನ್ ಆಗಿ ಹುಬ್ಬಳ್ಳಿ ಮೂಲದ ಪ್ರೇಮ್ ರಾಜ್ ಎಂಬವರು ಕೆಲಸ ಮಾಡುತ್ತಿದ್ದು, ಅವರು ತುಮಕೂರಿನಲ್ಲಿಯೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾರೆ.

ಇನ್ನು ಪ್ರೇಮ್ ರಾಜ್ ಅವರು ಕಳೆದ ಎರಡು ವರ್ಷದಲ್ಲಿ ಎರಡು ಬಾರಿ ಆಧಾರ್ ಕಾರ್ಡ್ ಕಳೆದುಕೊಂಡಿದ್ದು, ಇದೀಗ ಅವರ ಆಧಾರ್ ಕಾರ್ಡ್ ಸ್ಫೋಟಗೊಂಡ ಆಟೋದಲ್ಲಿ ಪತ್ತೆಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಪ್ರೇಮ್ ರಾಜ್, ನನಗೆ ಎಡಿಜಿಪಿ ಅಲೋಕ್ ಅವರು ಕರೆ ಮಾಡಿ ಕೂಡಲೇ ತುಮಕೂರು ಎಸ್‌‌ಪಿ ಆರನ್ನು ಸಂಪರ್ಕಿಸುವಂತೆ ಸೂಚಿಸಿದ್ದು, ಅದರಂತೆ ಎಸ್‌‌ಪಿ ಅವರನ್ನು ಸಂಪರ್ಕಿಸಿ ನನಗೂ ಇದಕ್ಕೂ ಯಾವುದೇ ಸಂಭಧವಿಲ್ಲ, ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿಕೆ ನೀಡಿರುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!