ಆರೋಪಿ ಗುರುತು ಪತ್ತೆ ಹಚ್ಚದೆ ಏನೂ ಹೇಳೋಕಾಗಲ್ಲ: ಎಡಿಜಿಪಿ ಅಲೋಕ್ ಕುಮಾರ್-ಶಂಕಿತ ಆರೋಪಿಯ ಕುಟುಂಬಸ್ಥರು ಆಸ್ಪತ್ರೆಗೆ ಬರಲು ಸೂಚನೆ
ಮಂಗಳೂರು: ನಗರದ ನಾಗುರಿಯಲ್ಲಿ ಶನಿವಾರ ಆಟೋ ರಿಕ್ಷಾದೊಳಗೆ ಸ್ಪೋಟವುಂಟಾದ ಘಟನೆಗೆ ಸಂಬಂಧಿಸಿದಂತೆ
ಆರೋಪಿಯ ಮುಖದ ಪರಿಚಯ ಸಿಗದೇ ಇರುವುದರಿಂದ ಶಂಕಿತ ಆರೋಪಿಯ ಮನೆಯವರನ್ನು ಆಸ್ಪತ್ರೆಗೆ ಬರುವಂತೆ ಸೂಚನೆ ನೀಡಲಾಗಿದೆ. ನ.21ರಂದು ಶಂಕಿತ ಆರೋಪಿಯ ಮನೆಯವರು ಬರಲಿದ್ದಾರೆ ಆ ಬಳಿಕ ಗುರುತು ಪತ್ತೆ ಹಚ್ಚಿದ ಬಳಿಕ ಆರೋಪಿಯ ಬಗ್ಗೆ ಪೂರ್ಣ ಮಾಹಿತಿ ನೀಡಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಎಡಿಜಿಪಿ ಅವರು ಸ್ಪೋಟ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮತ್ತಷ್ಟು ತೀವ್ರವಾಗಿ ನಡೆಸಲಾಗುತ್ತದೆ ಎಂದು ಅವರು ಹೇಳಿದರು.