ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಅಟ್ಟಾಡಿಸಿ ಹಲ್ಲೆ ನಡೆಸಿದ ಪ್ರಕರಣ: ನೋವಿನ ಮಾತು ಹಂಚಿಕೊಂಡ ಶಾಸಕ
ಹರಿದ ಶರ್ಟ್ ನೊಂದಿಗೆ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಕುಮಾರಸ್ವಾಮಿ, ಗುಂಪು ರೆಡಿ ಮಾಡಿ ಸಂಚು ಮಾಡಿ ನನ್ನ ಮೇಲೆ ಹಲ್ಲೆ ನಡೆಸಿ ಶಾಸಕರೇ ಆನೆ ಸಾಕಿದ್ದಾರೆ ಅಂತ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋರ್ಟ್ ಸರ್ಕಾರ ಆನೆ ಬಗ್ಗೆ ಏನು ಹೇಳುತ್ತದೆ ಇಡೀ ರಾಜ್ಯಕ್ಕೆ ಗೊತ್ತು. ಇಡೀ ದೇಶಕ್ಕೆ ಗೊತ್ತು ಎಂದು ಅವರು ತಮ್ಮ ನೋವಿನ ಮಾತನ್ನು ಹಂಚಿಕೊಂಡಿದ್ದಾರೆ.

ಮೂಡಿಗೆರೆ: ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ತೆರಳಿದ್ದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಶಾಸಕರು ಆರೋಪಿಸಿದ್ದಾರೆ.
ಇದೇ ವೇಳೆ ಮಾತನಾಡಿರುವ ಅವರು ಸಂಚು ಮಾಡಿ ನನ್ನ ಮೇಲೆ ಈ ಥರ ಹಲ್ಲೆ ಮಾಡಿದ್ದಾರೆ. ಇದರಲ್ಲಿ ಪೊಲೀಸರ ವೈಫಲ್ಯ ಕೂಡ ಇದೆ. ಪೊಲೀಸರು ಕೇವಲ 10ರಷ್ಟಿದ್ದರು. ನಾನು ಅಲ್ಲೇ ಕದಲದೇ ನಿಂತಿದ್ದೆ ಆದರೆ ಪೊಲೀಸರು ನನ್ನನ್ನು ಮಿಸ್ ಗೈಡ್ ಮಾಡಿ ಹೋಗಿ ಸರ್ ಅಂದ್ರು. ನಾನು ಸಾರ್ವಜನಿಕರ ಸೇವೆ ಮಾಡಲು ಇರೋದು. ನಾನು ಜಾಗ ಬಿಟ್ಟು ಕದಲುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಹೇಳಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದೆ.