ಜಿಲ್ಲೆ

ದನಕ್ಕೆ ಸ್ಕೂಟಿ ಡಿಕ್ಕಿ ಸವಾರ ದುರ್ಮರಣ



ತನ್ನ ದ್ವಿಚಕ್ರ ವಾಹನ (ಸ್ಕೂಟಿ)ದಲ್ಲಿ ತೆರಳುತ್ತಿದ್ದ ಸಂದರ್ಭ ದನವೊಂದು ಏಕಾಏಕಿ ರಸ್ತೆಗೆ ಅಡ್ಡ ಬಂದು ದನಕ್ಕೆ ಡಿಕ್ಕಿ ಸಂಭವಿಸಿ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ.
ಕುಶಾಲನಗರದಿಂದ ರಂಗಸಮುದ್ರಕ್ಕೆ ತೆರಳುವ ಮಾರ್ಗದಲ್ಲಿ ಬೆಟಗೇರಿ‌ ಬಳಿ ದನಕ್ಕೆ ಡಿಕ್ಕಿಯಾಗಿ ದ್ವಿಚಕ್ರ ಸವಾರ ಸ್ಥಳದಲ್ಲೇ ‌ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯನ್ನು ರಂಗಸಮುದ್ರ ಗ್ರಾಮದ ಹರಿಶ್ಚಂದ್ರ (42) ಎಂದು ಗುರುತಿಸಲಾಗಿದೆ.
ಕುಶಾಲನಗರದಲ್ಲಿ ಪ್ರಿಂಟಿಂಗ್ ಪ್ರೆಸ್ ನಲ್ಲಿ‌ ಕೆಲಸ ನಿರ್ವಹಿಸುತ್ತಿದ್ದು ಕೆಲಸ ಮುಗಿಸಿ ಮನೆಗೆ ತೆರಳುವ ಸಂದರ್ಭ ಘಟನೆ ಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!