ಕರಾವಳಿ

ಪುತ್ತೂರು:ವೀರಮಂಗಲದಲ್ಲಿ ಕೆರೆಗೆ ಬಿದ್ದು ಮಹಿಳೆ ಮೃತ್ಯು



ಪುತ್ತೂರು: ವೀರಮಂಗಲ ಸಮೀಪ ತೋಟದ ಕೆರೆಗೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ನ.24ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ವೀರಮಂಗಲ ನಿವಾಸಿ ಕೃಷ್ಣಪ್ಪ ಎಂಬವರ ಪತ್ನಿ ಅಕ್ಕಮ್ಮ ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ. ಅಕ್ಕಮ್ಮ ಅವರು ಬೆಳಿಗ್ಗೆ ಮನೆಯಿಂದ ನೀರು ತರಲೆಂದು ತೋಟದ ಕೆರೆಯ ಪಕ್ಕಕ್ಕೆ ಹೋದವರು ಅಲ್ಲಿ ಆಕಸ್ಮಿಕವಾಗಿ ಕರೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ನೀರು ತರಲು ಹೋದ ಅಕ್ಕಮ್ಮ ಇನ್ನೂ ಬಾರದ ಹಿನ್ನೆಲೆಯಲ್ಲಿ ಮನೆ ಮಂದಿ ಹುಡುಕಾಟ ನಡೆಸಿದರು. ಈ ಸಂದರ್ಭ ಅವರ ಮೃತ ದೇಹ ತೋಟದ ಕೆರೆಯಲ್ಲಿ ಪತ್ತೆಯಾಗಿದೆ. ಮೃತರು ಗಂಡ ಕೃಷ್ಣಪ್ಪ, ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!