ಕರಾವಳಿಕ್ರೈಂ

ಮಂಗಳೂರು: ಅನೈತಿಕ ಪೊಲೀಸ್‌ ಗಿರಿ ಪ್ರಕರಣ: ಮೂವರನ್ನು ಬಂಧಿಸಿದ ಕದ್ರಿ ಪೊಲೀಸರು



ಮಂಗಳೂರು: ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಮುತ್ತು, ಪ್ರಕಾಶ್, ರಾಕೇಶ್ ಬಂಧಿತರು. ಈ ಮೂವರೂ ಸಂಘ ಪರಿವಾರದ ಕಾರ್ಯಕರ್ತರು ಎಂದು ತಿಳಿದು ಬಂದಿದೆ.

ಘಟನೆ ಹಿನ್ನಲೆ:
ನವೆಂಬರ್ 24ರಂದು ಸಂಜೆ ಕಾರ್ಕಳದ ನಿಟ್ಟೆಯಿಂದ ತನ್ನ ಸಹಪಾಠಿ ಎಂದು ಹೇಳಿಕೊಂಡಿರುವ ಯುವತಿಯ ಜೊತೆಗೆ ಅಗಮಿಸುತ್ತಿದ್ದ ಜೆಪ್ಪು ನಿವಾಸಿ ಸೈಯ್ಯದ್ ರಶೀಮ್‌ನನ್ನು ನಂತೂರು ಸರ್ಕಲ್‌ ಬಳಿ ಏಕಾಏಕಿ ಬಸ್ಸನ್ನು ಅಡ್ಡ ಹಾಕಿ ಒಳನುಗ್ಗಿದ ತಂಡ, ಯುವಕನ ಬಳಿ ಇದ್ದ ಐಡಿ ಕಾರ್ಡ್‌ ತೋರಿಸಲು ಹೇಳಿ ಬಳಿಕ ಬಸ್ಸಿನಿಂದ ಕೆಳಕ್ಕೆ ಎಳೆದು ಹಾಕಿ ಹಲ್ಲೆ ನಡೆಸಿದ್ದರು.

ಆತನ ಜೊತೆಗೆ ಇದ್ದ ಭಿನ್ನ ಕೋಮಿನ ಯುವತಿಗೂ ಅಶ್ಲೀಲ ಪದಗಳನ್ನು ಬಳಸಿ ತರಾಟೆಗೆ ತೆಗೆದುಕೊಂಡಿದ್ದರು. ಅದಲ್ಲದೇ ಆರೋಪಿಗಳು ದೊಣ್ಣೆ, ಬೆತ್ತ ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದ್ದರು ಎಂದು ಸಂತ್ರಸ್ತ ಯುವಕ ಸೈಯ್ಯದ್‌ ರಶೀಮ್‌ ಕದ್ರಿ ಠಾಣೆಗೆ ದೂರು ನೀಡಿದ್ದರು.

ಸೈಯ್ಯದ್ ರಶೀಮ್‌ ಹಾಗೂ ಯುವತಿ ನಗರದ ಕಾಲೇಜಿನ ಸಹಪಾಠಿಗಳಾಗಿದ್ದರು. ಅಕ್ಟೋಬರ್‌ ತಿಂಗಳಿನಲ್ಲೂ ಭಿನ್ನ ಕೋಮಿನ ಯುವತಿ ಜೊತೆಗೆ ಬೆಂಗಳೂರಿಗೆ ಹೋಗುತ್ತಿದ್ದಾಗ ಮುಸ್ಲಿಂ ಯುವಕನನ್ನು ಬಸ್ಸಿನಿಂದ ಕೆಳಕ್ಕೆ ಇಳಿಸಿದ ಭಜರಂಗದಳ ಕಾರ್ಯಕರ್ತರು ಪಂಪ್ವೆಲ್ ಬಳಿ ಹಲ್ಲೆ ನಡೆಸಿದ್ದರು.

ನಂತೂರಿನ ಸೈಯದ್‌ ರಶೀಮ್‌ ಮೇಲೆ ನಡೆದ ಹಲ್ಲೆ ಪ್ರಕರಣದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಡಿಜಿಪಿ ಅಲೋಕ್‌ ಕುಮಾರ್ ಅವರು ಟ್ವೀಟ್‌ ಮೂಲಕ ತಿಳಿಸಿದ್ದರು.

Leave a Reply

Your email address will not be published. Required fields are marked *

error: Content is protected !!