ಕರಾವಳಿಕ್ರೈಂ

ಉಪ್ಪಿನಂಗಡಿ: ಭೀಕರ ಅಪಘಾತ: ಆಟೋ ಚಾಲಕ ಸಾವು



ಉಪ್ಪಿನಂಗಡಿ: ಎಟಿಎಂ ನ‌ ಹಣ ಸಾಗಿಸುವ ವಾಹನ ಹಾಗೂ ಅಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿ ಅಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ನೆಕ್ಕಿಲಾಡಿ ಬಳಿ ನಡೆದಿದೆ.
ಮೃತ ರಿಕ್ಷಾ ಚಾಲಕನನ್ನು ಉಪ್ಪಿನಂಗಡಿಯ ಸುಭಾಶ್ ನಗರ ನಿವಾಸಿ, ವಾಸು ಪೂಜಾರಿ ಎಂದು ಗುರುತಿಸಲಾಗಿದೆ.

ಎಟಿಎಂ ವಾಹನ ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದರೆ, ಅಟೋ ರಿಕ್ಷಾ ಉಪ್ಪಿನಂಗಡಿ ಕಡೆಗೆ ತೆರಳುತ್ತಿತ್ತು. ಘಟನೆಯಲ್ಲಿ ಅಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!