ಜಿಲ್ಲೆ

ಚಿರತೆ ದಾಳಿಯಿಂದ ಮೃತಪಟ್ಟ ಯುವತಿ ಕುಟುಂಬಕ್ಕೆ 7ಲಕ್ಷ ರೂ. ಪರಿಹಾರ



ಮೈಸೂರು: ಚಿರತೆ ದಾಳಿಯಿಂದ ಮೃತಪಟ್ಟ ಯುವತಿ ಕುಟುಂಬಕ್ಕೆ ಸರ್ಕಾರದ ವತಿಯಿಂದ 7ಲಕ್ಷ ರೂ. ಪರಿಹಾರ ನೀಡಲಾಗುವುದು. ಚಿರತೆ ಶೂಟ್ ಔಟ್ ಮಾಡುವಂತೆ ಸರ್ಕಾರದಿಂದ ಆದೇಶವೂ ಸಿಕ್ಕಿದೆ ಎಂದು ಮೈಸೂರು ವೃತ್ತ ಅರಣ್ಯಾಧಿಕಾರಿ ಮಾಲತಿ ಪ್ರಿಯಾ ತಿಳಿಸಿದ್ದಾರೆ.

ಚಿರತೆ ದಾಳಿಯಿಂದ ಎಸ್.ಕೆಬ್ಬೇಹುಂಡಿ ಗ್ರಾಮದ ಯುವತಿ ಮೇಘನಾ (22) ಸಾವನ್ನಪ್ಪಿದ್ದು, ಯುವತಿಯ ಶವ ಇಟ್ಟುಕೊಂಡು ತಿ.ನರಸೀಪುರ ಸರ್ಕಾರಿ ಆಸ್ಪತ್ರೆ ಬಳಿ ಗುರುವಾರ ಮಧ್ಯರಾತ್ರಿವರೆಗೂ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರ ಬಳಿಗೆ ಆಗಮಿಸಿದ ಮೈಸೂರು ವೃತ್ತ ಅರಣ್ಯಾಧಿಕಾರಿ ಮಾಲತಿ ಪ್ರಿಯಾ ಮಾತನಾಡಿ, ಮೃತ ಯುವತಿ ಕುಟುಂಬಕ್ಕೆ ಏಳುವರೆ ಲಕ್ಷ ರೂ. ಪರಿಹಾರ ನೀಡಲಾಗುವುದು. ಕುಟುಂಬದ ಓರ್ವರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಲಾಗುವುದು ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

error: Content is protected !!