ಜಿಲ್ಲೆರಾಜ್ಯ

ಹೊಲದಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ, ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ



ಹುಣಸೂರು ತಾಲ್ಲೂಕಿನ ಹೈರಿಗೆ ಗ್ರಾಮದ ತಮ್ಮಯ್ಯ ಎಂಬುವವರು ತಮ್ಮ ಹೊಲದಲ್ಲಿ ಹಸು ಕಟ್ಟಿರುವ ವೇಳೆ ಹುಲಿ ದಾಳಿ ನಡೆಸಿ ಹಸುವನ್ನು ಕೊಂದು ಹಾಕಿದ ಘಟನೆ ವರದಿಯಾಗಿದೆ.


ಅರಣ್ಯ ಇಲಾಖೆಯ ಅಧಿಕಾರಿಗಳು ಕಳೆದ ಕೆಲವು ವಾರಗಳಿಂದ ಹುಲಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದರು. ಹುಲಿ ಸಿಗದೆ ಜನರಲ್ಲಿ ಆತಂಕ ಮೂಡಿಸಿದ್ದು ಇದೀಗ ಹೈರಿಗೆ ಗ್ರಾಮದಲ್ಲಿ ಹಸು ಮೇಲೆ ದಾಳಿ ನಡೆಸಿರುವ ಹುಲಿ ಸುತ್ತ ಮುತ್ತಲಿನ ಗ್ರಾಮದ ಜನರಲ್ಲಿ ಬಯ ಹುಟ್ಟಿಸಿದೆ. ರೈತರು ತಮ್ಮ ಜಮೀನುಗಳಿಗೆ ಹೋಗಿ ಕೆಲಸ ಮಾಡಲು ಭಯ ಪಡುತ್ತಿದ್ದಾರೆ.


ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚಿಕ್ಕಹನಸೋಗೆ ಗ್ರಾಮದ ಹರೀಶ್‌ ಎಂಬುವರ ತೋಟದಲ್ಲಿ ಶನಿವಾರ ಚಿರತೆ ಕಾಣಿಸಿಕೊಂಡಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಚಿರತೆ ಕಾಣಿಸಿದ್ದು ಇದರಿಂದ ಗಾಬರಿಗೊಂಡು ಓಡಿದ ಹರೀಶ್‌, ಗ್ರಾಮದ ಜನರಿಗೆ ವಿಷಯ ತಿಳಿಸಿದರು ಎನ್ನಲಾಗಿದೆ
ಗ್ರಾಮಸ್ಥರು ಶಾಸಕ ಸಾ.ರಾ.ಮಹೇಶ್‌ ಅವರಿಗೆ ವಿಷಯ ತಿಳಿಸಿದ್ದು ಶಾಸಕರು ತಕ್ಷಣ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ , ಚಿರತೆ ಸೆರೆ ಹಿಡಿಯಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.


ಶಾಸಕರ ಸೂಚನೆ ಮೇರೆಗೆ ಅಧಿಕಾರಿಗಳು ಬೋನು ಇಟ್ಟು ಕಾದು ಕುಳಿತಿದ್ದಾರೆ. ಚಿರತೆ ರಾತ್ರಿ ವೇಳೆ ರೈತರ ಭತ್ತ, ಗದ್ದೆ, ತೋಟಗಳಲ್ಲಿ ಓಡಾಡಿದ ಹೆಜ್ಜೆ ಗುರುತು ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!