ಕರಾವಳಿ

ಪುತ್ತೂರು: ಕೆಮ್ಮಾಯಿ KSRTC ಬಸ್ ನಿಂದ ಬಿದ್ದು ಪ್ರಯಾಣಿಕ ಮೃತ್ಯು

ಪುತ್ತೂರು: ಕೆಮ್ಮಾಯಿ ಸಮೀಪ ಕೆಎಸ್ಸಾರ್ಟಿಸಿ ಬಸ್‌ನಿಂದ ಪ್ರಯಾಣಿಕರೊಬ್ಬರು ಬಿದ್ದು ಮೃತಪಟ್ಟ ಘಟನೆ ಡಿ.5ರಂದು ಸಂಜೆ ನಡೆದಿದೆ.

ಸಾಂದರ್ಭಿಕ ಚಿತ್ರ


ಕೆದಿಲ ಗ್ರಾಮದ ಮುದ್ರಾಜೆ ನಿವಾಸಿ ಪ್ರಸ್ತುತ ಕೆಮ್ಮಾಯಿಯಲ್ಲಿ ಬಾಡಿಗೆ ಮನೆಯಲ್ಲಿರುವ ಸೋಮಪ್ಪ ನಾಯ್ಕ ಎಂಬವರು ಮೃತಪಟ್ಟವರು. ಅವರು ಪುತ್ತೂರಿನಿಂದ ಉಪ್ಪಿನಂಗಡಿ ಹಳೆನೇರಂಕಿ ಕಡೆ ಹೋಗುತ್ತಿದ್ದ ಪ್ರಯಾಣಿಸುತ್ತಿದ್ದು, ಕೆಮ್ಮಾಯಿ ಬಳಿ ಬಸ್ ನಿಲುಗಡೆ ವೇಳೆ ಬಸ್‌ನಿಂದ ಬಿದ್ದು ತೀವ್ರ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!