ಕರಾವಳಿರಾಜಕೀಯರಾಜ್ಯ

ಡಿ.ಕೆ ಶಿವಕುಮಾರ್ ವಿರುದ್ಧ ನಾನು ಯಾವುದೇ ಹೇಳಿಕೆ ನೀಡಿಲ್ಲ-ಹೇಮನಾಥ ಶೆಟ್ಟಿ



ಪುತ್ತೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಯಾವುದೇ ಹೇಳಿಕೆಯನ್ನು ನಾನು ನೀಡಿಲ್ಲ. ಡಿಕೆಶಿ ನಮ್ಮ ನಾಯಕರು ಮತ್ತು ನನ್ನ ಅತ್ಯಂತ ಆತ್ಮೀಯರಾಗಿದ್ದಾರೆ.
ನಮ್ಮೊಳಗೆ ಸ್ನೇಹಾಚಾರವಿದೆ. ಚುನಾವಣೆಯ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ರಾಜ್ಯ ನಾಯಕರ ವಿರುದ್ಧ ಮಾತನಾಡುವ ಸಣ್ಣ ವ್ಯಕ್ತಿ ನಾನಲ್ಲ ಎಂದು ಕಾವು ಹೇಮನಾಥ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.


ಡಿ.8ರಂದು ಪುತ್ತೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು
ನನ್ನನ್ನು ಕೆ.ಪಿ.ಸಿ‌.ಸಿ ಸಂಯೋಜಕ ಸ್ಥಾನದಿಂದ ವಿಮುಕ್ತಿಗೊಳಿಸಿದ್ದಾರೆ ಎನ್ನುವ ಸುದ್ಧಿ ಕೆಲವು ವೆಬ್ ಸೈಟ್ ಗಳಲ್ಲಿ ಭಿತ್ತರವಾಗುತ್ತಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ಆರ್.ಎಸ್.ಎಸ್ ಹಾಗು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ವ್ಯಕ್ತಿಯನ್ನು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಳಿಸುವ ವಿಚಾರದಲ್ಲಿ ಪಕ್ಷದ ಹಿತೈಷಿಗಳು ನಡೆಸಿದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಹೇಳಿಕೆ ನೀಡಿದ್ದೇನೆ ಎನ್ನುವ ಆರೋಪ ನನ್ನ ವಿರುದ್ಧ ಮಾಡಲಾಗಿದ್ದು ಇದು ಶುದ್ಧ ಸುಳ್ಳು. ನನ್ನ ವಿರುದ್ಧದ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!