ಕರಾವಳಿಕ್ರೈಂ

ವಿಟ್ಲ: ಖಾಸಗಿ ಬಸ್ಸಿನ ಚಾಲಕರ ಹೊಡೆದಾಟ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ವಿಟ್ಲ: ಟೈಮಿಂಗ್ಸ್ ವಿಚಾರದಲ್ಲಿ ಎರಡು ಖಾಸಗಿ ಬಸ್ಸಿನ ಚಾಲಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡ ಘಟನೆ ವಿಟ್ಲದ ಖಾಸಗಿ ಬಸ್ಸುನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದ್ದು, ಚಾಲಕರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಎರಡು ಖಾಸಗಿ ಬಸ್ ಚಾಲಕರ ನಡುವೆ ಟೈಮಿಂಗ್ಸ್ ವಿಚಾರದಲ್ಲಿ ಹೊಡೆದಾಟ ನಡೆದಿತ್ತು. ಇಂದು ಬೆಳಗ್ಗೆ ಮಹೇಶ್ ಮತ್ತು ಮಣಿಕಂಠ ಬಸ್ ಚಾಲಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡಿದ್ದಾರೆ‌. ಘಟನೆಯಿಂದ ಬಸ್ ನಿಲ್ದಾಣದಲ್ಲಿ ಅಲ್ಪ ಹೊತ್ತು ಪ್ರಕ್ಷುಬ್ದ ವಾತಾವರಣ ನಿರ್ಮಾಣಗೊಂಡಿತ್ತು.

ಮಾಹಿತಿ ಅರಿತು ಸ್ಥಳಕ್ಕೆಆಗಮಿಸಿದ ವಿಟ್ಲ ಠಾಣಾ ಪೊಲೀಸರು ಇಬ್ಬರು ಚಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!