ಕರಾವಳಿ

ಜಯನಗರ ಅಂಗನವಾಡಿ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ



ಜಯನಗರ ಮೂರನೇ ವಾರ್ಡಿನ ಅಂಗನವಾಡಿ ರಸ್ತೆಗೆ ಕಾಂಕ್ರೀಕರಣಕ್ಕೆ ಇಂದು ಗುದ್ದಲಿ ಪೂಜೆ ನೆರವೇರಿಸಲಾಯಿತು.


15ನೇ ಹಣಕಾಸಿನ ಯೋಜನೆ ಯಡಿಯಲ್ಲಿ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ 80 ಮೀಟರ್ ಉದ್ದದ ರಸ್ತೆ ಕಾಂಕ್ರೀಟೀಕರಣಗೊಳ್ಳಲಿದ್ದು ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.


ಸ್ಥಳೀಯ ನಗರ ಪಂಚಾಯತ್ ಸದಸ್ಯ ಎಂ ಬಾಲಕೃಷ್ಣ ಭಟ್ ಕೊಡಂಕೇರಿ, ಹಾಗೂ ಶಿಲ್ಪಾ ಸುದೇವ್, ಗುತ್ತಿಗೆದಾರ ಜಾಹಿರ್ ಜಯನಗರ ಹಾಗೂ ಸ್ಥಳೀಯ ನಿವಾಸಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!