ಜಿಲ್ಲೆರಾಜಕೀಯ

ಡೋಂಗಿ ಹಿಂದುತ್ವವಾದಿಗಳ ವಿರುದ್ಧ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ -ಮುತಾಲಿಕ್



ಉಡುಪಿ: ಹಿಂದುತ್ವಕ್ಕಾಗಿ, ಹಿಂದೂ ಕಾರ್ಯಕರ್ತರ ರಕ್ಷಣೆಗಾಗಿ, ಡೋಂಗಿ ಹಿಂದುತ್ವವಾದಿಗಳ ವಿರುದ್ಧ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು.

ಡಿ.17ರಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದು ಜನರಿಂದ ಉತ್ತಮ ಸ್ಪಂದನೆ ದೊರಕುತ್ತಿದೆ. ಹಾಗಾಗಿ ಇಲ್ಲಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.

ಕಾರ್ಕಳ ಕ್ಷೇತ್ರ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರನ್ನು ಬೆದರಿಸುವ, ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಇಂತಹ ಕಾರ್ಯಗಳು ಸಚಿವರಿಗೆ ಶೋಭೆ ತರುವುದಿಲ್ಲ ಎಂದು ವಿ.ಸುನಿಲ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾರ್ಕಳ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಅಡ್ಡಿಪಡಿಸಿದರೆ ಎಲ್ಲ ಕ್ಷೇತ್ರಗಳಲ್ಲಿ ಹಿಂದೂ ಒಕ್ಕೂಟ ಬಿಜೆಪಿ ವಿರುದ್ಧವಾಗಿ ಕೆಲಸ ಮಾಡಲಿದೆ ಎಂದ ಅವರು
ಹಿಂದುತ್ವಕ್ಕಾಗಿ ಮನೆ ಮನೆಗೂ ತೆರಳಿ ಜೋಳಿಗೆ ಹಿಡಿದು ಮತಭಿಕ್ಷೆ ಬೇಡುತ್ತೇನೆ. ಆರ್ಥಿಕ ನೆರವು ಕೇಳುತ್ತೇನೆ ಎಂದರು.‌

Leave a Reply

Your email address will not be published. Required fields are marked *

error: Content is protected !!