ರಾಜಕೀಯರಾಜ್ಯ

ಕೆಂಪಣ್ಣ ಅವರೊಂದಿಗೆ ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ನಳಿನ್ ಕುಮಾರ್



ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಶೇ 40ರಷ್ಟು ಕಮಿಷನ್‌ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ರಾಜ್ಯ ಅಧ್ಯಕ್ಷ ಕೆಂಪಣ್ಣ ಅವರೊಂದಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೂ ಜೈಲಿಗೆ ಹೋಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಹೇಳಿದರು.

ಬಿಜೆಪಿ ರಾಜ್ಯ ಪ್ರಕೋಷ್ಠಗಳ ಪದಾಧಿಕಾರಿಗಳ ಸಭೆಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ ಪಕ್ಷ ಭ್ರಷ್ಟಾಚಾರದ ಪಿತಾಮಹ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿದರು. ಈಗ ಬಸವರಾಜ ಬೊಮ್ಮಾಯಿಯವರು ಅದಕ್ಕೆ ಶಕ್ತಿ ತುಂಬುತ್ತಿದ್ದಾರೆ’ ಎಂದರು.

ರಾಜ್ಯ ಸರ್ಕಾರದ ಮೇಲೆ ಶೇ 40ರಷ್ಟು ಕಮಿಷನ್‌ ಪಡೆಯುವ ಆರೋಪವನ್ನು ಕಾಂಗ್ರೆಸ್‌ನವರು ಮಾಡುತ್ತಿದ್ದಾರೆ. ಆರೋಪಗಳ ಬಗ್ಗೆ ದಾಖಲೆಗಳ ಸಮೇತ ಲೋಕಾಯುಕ್ತಕ್ಕೆ ದೂರು ನೀಡಲಿ. ಇದುವರೆಗೆ ಯಾರೊಬ್ಬರೂ ಒಂದೇ ಒಂದು ದಾಖಲೆ ನೀಡಿಲ್ಲ. ಸರ್ಕಾರ, ಸಚಿವರ ವಿರುದ್ಧ ಆರೋಪ ಮಾಡಿದ್ದ ಕೆಂಪಣ್ಣ ವಿರುದ್ಧವೇ ಪ್ರಕರಣ ದಾಖಲಾಗಿದೆ ಮುಂದಿನ ದಿನಗಳಲ್ಲಿ ಕೆಂಪಣ್ಣ ಅವರೊಂದಿಗೆ ಸಿದ್ದರಾಮಯ್ಯ ಕೂಡಾ ಜೈಲಿಗೆ ಹೋಗಲಿದ್ದಾರೆ ಎಂದು ಕಟೀಲ್ ಹೇಳಿದರು.

Leave a Reply

Your email address will not be published. Required fields are marked *

error: Content is protected !!