ಜಿಲ್ಲೆ

ಹುಣಸೂರು :ಆನೆ ದಾಳಿಗೆ ಮಹಿಳೆ ಸಾವು ಮತ್ತೊರ್ವರು ಗಂಭೀರ



ಆನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟರೆ ಮತ್ತೊಬ್ಬರು ಗಂಭೀರ ಗಾಯಗಳಾಗಿರುವ ಘಟನೆ ಡಿಸೆಂಬರ್ 30ರಂದು ಮುಂಜಾನೆ ಸಮಯದಲ್ಲಿ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಚಿಕ್ಕಬೀಚನಹಳ್ಳಿಯ ಸಿದ್ದೇಗೌಡರ ಪತ್ನಿ ಚಿಕ್ಕಮ್ಮ ಎಂದು ಗುರುತಿಸಲಾಗಿದೆ.
ಘಟನೆಯಿಂದ ಬಿಳಿಕೆರೆ ಗ್ರಾಮದ ರವಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ.


ಜಮೀನ ಬಳಿ ಹುರುಳಿ ಕಣದಲ್ಲಿ ಚಿಕ್ಕಮ್ಮ ಹಾಗೂ ಪತ್ನಿ ಸಿದ್ದೇಗೌಡ ಕೆಲಸ ಮಾಡುತ್ತಿದ್ದಾಗ ಇಬ್ಬರ ಮೇಲೆ ಆನೆ ಏಕಾಏಕಿ ದಾಳಿ ಮಾಡಿದ್ದು
ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ, ಆದರೆ ಚಿಕ್ಕಮ್ಮ ಅವರಿಗೆ ಅಲ್ಲಿಂದ ತಕ್ಷಣಕ್ಕೆ ಓಡಿಹೋಗಲು ಸಾಧ್ಯವಾಗದೆ ಆನೆ ಕಾಲಿಗೆ ಸಿಕ್ಕು ಮೃತಪಟ್ಟಿದ್ದಾರೆ.

ಚಿಕ್ಕಬೀಚನಹಳ್ಳಿ ದಾಳಿ ಮಾಡಿದ ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬುವವರ ಮೇಲು ದಾಳಿ ಮಾಡಿದೆ.
ಮೃತ ಕುಟುಂಬಸ್ಥರ ಭೇಟಿ ಮಾಡಿರುವ ಶಾಸಕ ಜಿ.ಟಿ.ದೇವೆಗೌಡ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!