ಜಿಲ್ಲೆ

ಹೃದಯಾಘಾತ: 6ನೇ ತರಗತಿ ವಿದ್ಯಾರ್ಥಿ ಮೃತ್ಯು



ತೀವ್ರ ಹೃದಯಾಘಾತದಿಂದ 6ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರಿನಲ್ಲಿ ನಡೆದಿದೆ.

12 ವರ್ಷದ ಬಾಲಕ ಕೀರ್ತನ್ ಮೃತ ವಿದ್ಯಾರ್ಥಿ. ನಿನ್ನೆ ರಾತ್ರಿ ಮನೆಯಲ್ಲಿದ್ದ ವೇಳೆ ಬಾಲಕ ಕಿರುಚಿಕೊಂಡಿದ್ದು, ಆತಂಕಗೊಂಡ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ.

ಆದರೆ ಮಾರ್ಗ ನಡುವೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ. ಪುತ್ರನನ್ನು ಕಳೆದುಕೊಂಡ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

error: Content is protected !!