ಕರಾವಳಿರಾಜಕೀಯರಾಜ್ಯ

ಜ.22ರಂದು ಕಾಂಗ್ರೆಸ್ ‘ಕೈ’ ಹಿಡಿಯಲಿರುವ ಅಶೋಕ್ ರೈ: ಸಿದ್ದರಾಮಯ್ಯ, ಡಿಕೆಶಿ ಸಮ್ಮುಖದಲ್ಲಿ ಮಂಗಳೂರಿನಲ್ಲಿ ಪಕ್ಷಕ್ಕೆ ಸೇರ್ಪಡೆ



ಪುತ್ತೂರು: ಕೊನೆಗೂ ಬಿಜೆಪಿಯ ಜಿಲ್ಲಾ ಕಾರ್ಯಕಾರಿಣಿಯ ಸದಸ್ಯರೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರೂ ಆಗಿದ್ದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.


ಮಂಗಳೂರಿನ ನೆಹರೂ ಮೈದಾನದಲ್ಲಿ ಜ.22ರಂದು ಅಪರಾಹ್ನ ನಡೆಯಲಿರುವ ಕಾಂಗ್ರೆಸ್‌ನ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್ ರೈ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿದ್ದಾರೆ.

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿರುವ ಮಾಜಿ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಹಲವು ನಾಯಕರು ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಂಗಳೂರಿನಲ್ಲಿ ನಡೆಯುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ 50 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಪುತ್ತೂರಿನಿಂದ ಬಸ್, ವಿವಿಧ ವಾಹನಗಳಲ್ಲಿ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗದವರು ಕಾಂಗ್ರೆಸ್ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!