ಕರಾವಳಿ

ಸರ್ವೆ: ಎಲಿಯದಲ್ಲಿ ರಬ್ಬರ್ ತೋಟಕ್ಕೆ ಬೆಂಕಿ, ಅಪಾರ ನಷ್ಟ




ಪುತ್ತೂರು: ರಬ್ಬರ್ ತೋಟಕ್ಕೆ ಬೆಂಕಿ ಬಿದ್ದು ಅಪಾರ ನಷ್ಟ ಸಂಭವಿಸಿದ ಘಟನೆ ಫೆ.2 ರಂದು ಮಧ್ಯಾಹ್ನ ಸರ್ವೆ ಗ್ರಾಮದ ಎಲಿಯ ಅಜ್ಜಿಕಲ್ಲು ಎಂಬಲ್ಲಿ ವರದಿಯಾಗಿದೆ.

ಅಬ್ದುಲ್ ಖಾದರ್ ಎಂಬವರ ರಬ್ಬರ್ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಹಲವು ಮರಗಳು ಬೆಂಕಿಗಾಹುತಿಯಾಗಿವೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಮುಂಡೂರು ಗ್ರಾಪಂ ಸದಸ್ಯ ಕರುಣಾಕರ ಗೌಡ ಎಲಿಯರವರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!