ಸುಳ್ಯ: ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು
ಸುಳ್ಯ ಜಯನಗರದ ಯುವಕ ಸಂದೀಪ್ (20ವರ್ಷ )ಎಂಬಾತ ಕಳೆದ ಒಂದು ವಾರದ ಹಿಂದೆ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸುಳ್ಯ ನಗರದ ಜಯನಗರ ನಿವಾಸಿ ದಿವಂಗತ ಕೃಷ್ಣ ಎಂಬುವರ ಪುತ್ರರಾದ ಇವರು ಒಂದು ವಾರದ ಹಿಂದೆ ಜಯನಗರ ತಮ್ಮ ಮನೆಯಲ್ಲಿಯೇ ವಿಷ ಸೇವನೆ ಮಾಡಿದ್ದರು. ಈ ಸಂದರ್ಭ ಮನೆಯವರಿಗೆ ವಿಷಯ ತಿಳಿದು ಆತನನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.
ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತ ಯುವಕ ತಾಯಿ ಕುಸುಮ, ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.