ಕರಾವಳಿ

ಕಡಬ: ಬೆಳ್ಳಂಬೆಳಗ್ಗೆ ಕಾಡಾನೆಯ ಅಟ್ಟಹಾಸ: ಯುವತಿ ಸೇರಿ ಇಬ್ಬರು ಮೃತ್ಯು





ಕಡಬ: ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ಮುಂಜಾನೆ ಆನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.




ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ ಎಂಬವರು ಸೊಸೈಟಿ ಗೆ ಮನೆಯಿಂದ ಹೋಗುತ್ತಿದ್ದ ವೇಳೆ ಮೀನಾಡಿ ಎಂಬಲ್ಲಿ ಆನೆ ದಾಳಿ ನಡೆಸಿದೆ. ಇದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೆಯೂ ಆನೆ ದಾಳಿ ಮಾಡಿದ್ದು ರಮೇಶ್ ರೈ ಸ್ಥಳದಲ್ಲಿ ಮೃತಪಟ್ಟರೆ ರಂಜಿತ ಅವರು ನೆಲ್ಯಾಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!