ಕಡಬ: ಆನೆ ದಾಳಿಗೆ ಇಬ್ಬರು ಬಲಿಯಾದ ಪ್ರಕರಣ: ಸಾರ್ವಜನಿಕರ ಆಕ್ರೋಶ- ಸ್ಥಳಕ್ಕೆ ಡಿಸಿ ಭೇಟಿ
ಕಡಬ: ರೆಂಜಿಲಾಡಿ ಗ್ರಾಮದಲ್ಲಿ ಇಂದು ಮುಂಜಾನೆ ಆನೆ ದಾಳಿಯಿಂದ ಯುವತಿ ಹಾಗೂ ವ್ಯಕ್ತಿಯೋರ್ವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ದ.ಕ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ವೀಕ್ಷಣೆ ನಡೆಸಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮೃತ ರಂಜಿತಾ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರಂಜಿತಾ ಅವರ ಮನೆಯವರು ಜಿಲ್ಲಾಧಿಕಾರಿಯವರಲ್ಲಿ ತನ್ನ ನೋವನ್ನು ಹೇಳಿಕೊಂಡರು. ಈ ಸಂದರ್ಭದಲ್ಲಿ ದುಃಖತ್ತಪ್ತರನ್ನು ಸಂತೈಸಿದ ಜಿಲ್ಲಾಧಿಕಾರಿಯವರು ಮೃತರಿಗೆ ತಲಾ 15 ಲಕ್ಷ ರೂ ಪರಿಹಾರ ಹಾಗೂ ರಂಜಿತಾ ಅವರ ಸಹೋದರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿದರು. ಬಳಿಕ ಆಕ್ರೋಶಗೊಂಡಿದ್ದ ಸ್ಥಳೀಯರ ಜತೆ ಕೂಡ ಮಾತುಕತೆ ನಡೆಸಿದರು.
ಇಂದೆ ಕಾರ್ಯಚರಣೆ ಪ್ರಾರಂಭ
ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಅರಣ್ಯಾಧಿಕಾರಿಯವರು ಮಾತನಾಡಿ, ಇಂದೇ ಆನೆಯನ್ನು ಹಿಡಿಯಲು ಕಾರ್ಯಾಚರಣೆ ಮಾಡಲಾಗುವುದು. ಇದಕ್ಕೆ ಬೇಕಾದ ಎಲ್ಲಾ ತಯಾರಿಗಳಿಗೆ ಸಿದ್ದತೆ ನಡೆಸಲಾಗುತ್ತದೆ ಎಂದು ಹೇಳಿದರು.
ಸಾರ್ವಜನಿಕರ ತೀವ್ರ ಆಕ್ರೋಶ
ಮುಂಜಾನೆಯಿಂದ ಬಹು ಸಂಖ್ಯೆಯಲ್ಲಿ ಜಮಾಯಿಸಿದ ಸಾರ್ವಜನಿಕರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.