ಕರಾವಳಿರಾಜಕೀಯ

ಗ್ರಾ.ಪಂ.ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಿಗೆ ಗೆಲುವು: ಪುತ್ತೂರು ಶಾಸಕ, ಬಿಜೆಪಿ ಅಧ್ಯಕ್ಷ ಪ್ರತಿಕ್ರಿಯೆ



ಗ್ರಾ.ಪಂ.ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಅಭೂತಪೂರ್ವ ಗೆಲುವು ಸಾಧಿಸಿದ್ದು ಸರಕಾರದ ಅಭಿವೃದ್ಧಿ ಪರ ಕಾರ್ಯಕ್ರಮವನ್ನು ಜನರು ಒಪ್ಪಿಕೊಂಡಿದ್ದಾರೆ ಮತ್ತು ಜನರು ಬಿಜೆಪಿಯನ್ನು ಸ್ವೀಕಾರ ಮಾಡಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

ಜನರು ಅಭಿವೃದ್ಧಿ ಪರ ಇದ್ದಾರೆ ಎನ್ನುವುದು ಈ ಗ್ರಾ.ಪಂ ಉಪಚುನಾವಣೆಯಲ್ಲಿ ತಿಳಿದು ಬಂದಿದೆ. ಬಿಜೆಪಿಯ ಬೆಂಬಲಿತ ಅಭ್ಯರ್ಥಿಗಳಿಗೆ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ವಿಧಾನ ಸಭಾ ಚುನಾವಣೆಗೆ ದಿಕ್ಸೂಚಿ-ಆಳ್ವ ಗ್ರಾಮ ಪಂಚಾಯತ್ ಉಪ ಚುನಾವಣೆಯಲ್ಲಿ ಬಿಜೆಪಿಯು ಭರ್ಜರಿ ಜಯಗಳಿಸಿದ ಫಲಿತಾಂಶವು ಮುಂಬರುವ ವಿಧಾನ ಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ತಿಳಿಸಿದ್ದಾರೆ.

ಬಿಜೆಪಿ ಪಕ್ಷದ ಪರ ಒಲವಿದೆ ಎಂಬುದನ್ನು ಈ ಫಲಿತಾಂಶದ ಮೂಲಕ ಜನತೆ ತೋರಿಸಿಕೊಟ್ಟಿದ್ದಾರೆ.ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ಸಾಧನೆಯನ್ನು ಮೆಚ್ಚಿ ಜನತೆ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ.ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿಯೂ ಬಿಜೆಪಿ ಭರ್ಜರಿ ಜಯಗಳಿಸಲಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!