ಈ ಬಾರಿ ನನ್ನ ಕೊನೆಯ ಚುನಾವಣೆ-ರಮಾನಾಥ ರೈ
ಬಂಟ್ವಾಳ: ಇಲ್ಲಿಂದಲೇ ರಾಜಕೀಯವನ್ನು ಆರಂಭಿಸಿದ್ದೇನೆ. ಕಾಂಗ್ರೆಸ್ ನೀಡಿದ ಎಲ್ಲ ಅವಕಾಶಗಳನ್ನು ಬಳಸಿ ಜನಸೇವೆ ಮಾಡಿದ್ದೇನೆ. ಈವರೆಗೆ 8 ಬಾರಿ ಸ್ಪರ್ಧಿಸಿದ್ದು ಶಾಸಕನಾಗಿ, ಸಚಿವನಾಗಿ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಂದಿನದು 9ನೇ ಚುನಾವಣೆಯಾಗಿದ್ದು, ಕೊನೆಯ ಬಾರಿಗೆ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಾನು ಮಾಡಿದ ಕೆಲಸವನ್ನು ಮಾತ್ರ ನನ್ನದೆಂದು ಹೇಳಿದ್ದು ಇನ್ಯಾರೋ ಮಾಡಿದ್ದನ್ನು ನನ್ನದು ಎನ್ನುವ ಜಾಯಮಾನ ನನಗಿಲ್ಲ. ಜನರು ಮತ್ತೊಮ್ಮೆ ಅವಕಾಶ ನೀಡಿದರೆ ಅದ್ಭುತವಾಗಿ ಕೆಲಸ ಮಾಡಿ ತೋರಿಸಲಿದ್ದೇನೆ ಎಂದರು.