ಕೆದಂಬಾಡಿಯಲ್ಲಿ ಮನೆ-ಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ
ಪುತ್ತೂರು: ಕೆದಂಬಾಡಿ 185ನೇ 2ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದರು.

ಬೂತ್ ಅಧ್ಯಕ್ಷ ಅಬ್ದುಲ್ಲಾ ಹಾಜಿ ಘಟ್ಟಮನೆ, ಕೆದಂಬಾಡಿ ಗ್ರಾಮ ಪಂಚಾಯತ್ ಸದಸ್ಯೆ ಕೆ. ಅಸ್ಮಾ, ವಲಯ ಕಾಂಗ್ರೆಸ್ ಕಾರ್ಯದರ್ಶಿ ಅಶ್ರಫ್ ಸಾರೆಪುಣಿ, ಕಾರ್ಯಕರ್ತರಾದ ನಾರಾಯಣ ಪಾಟಾಳಿ, ಉಸ್ಮಾನ್ ಸಾರೆಪುಣಿ ಉಪಸ್ಥಿತರಿದ್ದರು.






