ಕರಾವಳಿರಾಜಕೀಯರಾಜ್ಯ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಹೆಸರು ಅಂತಿಮಗೊಳಿಸಿದ ಎಐಸಿಸಿ?

ಪುತ್ತೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉದ್ಯಮಿ ಅಶೋಕ್ ಕುಮಾರ್ ಕೋಡಿಂಬಾಡಿ ಹೆಸರು ಬಹುತೇಕ ಅಂತಿಮಗೊಂಡಿದೆ ಎಂಬ ಮಾಹಿತಿ ಕಾಂಗ್ರೆಸ್‌ನ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.



ಬಿಜೆಪಿಯಲ್ಲಿ 20 ವರ್ಷಗಳ ಕಾಲ ತೊಡಗಿಸಿಕೊಂಡಿದ್ದ ಅಶೋಕ್ ಕುಮಾರ್ ರೈಯವರು ಕೆಲ ತಿಂಗಳ ಹಿಂದೆ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ಪುತ್ತೂರಿನಿಂದ 14 ಮಂದಿ ಆಕಾಂಕ್ಷಿಗಳು ಈಗಾಗಲೇ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಮೂವರ ಹೆಸರು ಅಂತಿಮ ಚರ್ಚೆಯಲ್ಲಿದ್ದು ಅದರಲ್ಲಿ ಅಶೋಕ್ ಕುಮಾರ್ ರೈ ಹೆಸರು ಎಐಸಿಸಿಗೆ ರವಾನೆಯಾಗಿ ಅಂತಿಮಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜಿಲ್ಲೆಯ ಕಾಂಗ್ರೆಸ್ ನ ಪ್ರಮುಖ ಇಬ್ಬರು ನಾಯಕರು ಅಶೋಕ್ ಕುಮಾರ್ ರೈ ಪರವಾಗಿ ಬ್ಯಾಟ್ ಬೀಸಿದ್ದಾರೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!