ಕರಾವಳಿ

ದೈವ ನರ್ತನ ಮಾಡುತ್ತಿದ್ದಾಗ ಕುಸಿದು ಬಿದ್ದು ದೈವನರ್ತಕ ಮೃತ್ಯು: ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ

ದೈವ ನರ್ತಕರೊಬ್ಬರು ದೈವ ನರ್ತನ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಮೃತ ಪಟ್ಟ ಘಟನೆ ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ.

ಕಾಂತು ಅಜಿಲ ಮೂಲಂಗೀರಿ ಸಾವನ್ನಪ್ಪಿದ ದೈವ ನರ್ತಕ. ಇವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.



ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿದ್ದ ವೇಳೆ ದೈವ ನರ್ತನ ಮಾಡುತ್ತಿದ್ದವರು ಕುಸಿದು ಬಿದ್ದರು. ಈ ದೃಶ್ಯ ಮೊಬೈಲ್ ನಲ್ಲಿ ಕೂಡ ಸೆರೆಯಾಗಿದ್ದು,ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೂ ಅವರು ಕೊನೆಯುಸಿರೆಳೆದಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!