ಕ್ರೈಂಜಿಲ್ಲೆ

ಅಜ್ಜಿ ಮನೆಗೆ ಹೋಗಿದ್ದ ಬಾಲಕನ ಬರ್ಬರ ಕೊಲೆ ಪ್ರಕರಣ: ಆರೋಪಿ ಅರೆಸ್ಟ್



ಅಜ್ಜಿ ಮನೆಗೆ ಬಂದಿದ್ದ ಬಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕನ ಕೊಲೆ ನಡೆದಿತ್ತು. ರವಿ ವೆಂಕಟೇಶ ಬಂಧಿತ ಆರೋಪಿ.

ಆರೋಪಿ ಕುಡಿದ ಮತ್ತಿನಲ್ಲಿರುವಾಗ ಬಾಲಕನ ಕೆನ್ನೆಗೆ ಹೊಡೆದಿದ್ದು ಆ ವೇಳೆ ಬಾಲಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ ಎನ್ನಲಾಗಿದೆ. ನಂತರ ಆರೋಪಿ ಬಾಲಕನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಬೆರಳಚ್ಚು ಸಾಕ್ಷಿ ಪೊಲೀಸರಿಗೆ ಲಭ್ಯವಾಗಬಾರದು ಎಂಬ ಕಾರಣಕ್ಕೆ ಬಾಲಕನ ಬಟ್ಟೆ ಬಿಚ್ಚಲು ಪ್ರಯತ್ನಿಸಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!