ಕರಾವಳಿರಾಜಕೀಯ

ಪುತ್ತೂರು ವಿಧಾನಸಭಾ ಕ್ಷೇತ್ರ: ಬಿಜೆಪಿಯಿಂದ ಕಿಶೋರ್ ಬೊಟ್ಯಾಡಿ ಹೆಸರು ರೇಸ್’ನಲ್ಲಿ



ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಹಾಲಿ ಶಾಸಕ ಸಂಜೀವ ಮಠಂದೂರು ಅವರಿಗೇ ಟಿಕೆಟ್ ಸಿಗುವುದು ಅನಿಶ್ಚಿತತೆಯಲ್ಲಿದೆ. ಅರುಣ್ ಕುಮಾರ್ ಪುತ್ತಿಲರಿಗೆ ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಇತ್ತೀಚೆಗೆ ಟ್ವೀಟ್ ಅಭಿಯಾನ ನಡೆಸಿದ್ದರು. ಇದೀಗ ಪುತ್ತೂರು ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಬಿಜೆಪಿಯೊಳಗೆ ಬಾರಿ ಚರ್ಚೆ ನಡೆದಿದ್ದು ಹಾಲಿ ಶಾಸಕರನ್ನು ಬದಲಾಯಿಸುವ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ ಎನ್ನಲಾಗಿದೆ.

ಸಂಜೀವ ಮಠಂದೂರುರವರನ್ನು ಬದಲಾಯಿಸಿದ್ದೆಯಾದಲ್ಲಿ ಪಕ್ಷಕ್ಕೆ ಆಗುವ ಅಲ್ಲ ಡ್ಯಾಮೇಜ್ ಬಗ್ಗೆಯೂ ಚರ್ಚೆ ನಡೆದಿರುವುದಾಗಿ ತಿಳಿದು ಬಂದಿದೆ. ಇದೀಗ ಬಿಜೆಪಿ ಹೈಕಮಾಂಡ್ ಪುತ್ತೂರಿಗೆ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ್ದು ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದರೆ ಹೇಗೆ ಎನ್ನುವ ಬಗ್ಗೆ ಭಾರಿ ಚರ್ಚೆ ನಡೆದಿದೆ ಎನ್ನಲಾಗಿದ್ದು ಇದೀಗ ಕಿಶೋರ್ ಕುಮಾರ್ ಅವರ ಹೆಸರೇ ಮುಂಚೂಣಿಯಲ್ಲಿದೆ ಎನ್ನಲಾಗಿದೆ.

ಹಿಂದಿನಿಂದಲೂ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಕಿಶೋರ್ ಕುಮಾರ್ ಬೊಟ್ಯಾಡಿ ಅವರು ಸರ್ವೆ ಗ್ರಾಮದ ಬೊಟ್ಯಾಡಿ ನಿವಾಸಿಯಾಗಿದ್ದು ಪ್ರಸ್ತುತ ಮೆಸ್ಕಾಂನ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!