ಕ್ರೈಂರಾಜ್ಯ

ಪುನೀತ್ ಕೆರೆಹಳ್ಳಿ ಸೇರಿ ಐವರು ಆರೋಪಿಗಳಿಗೆ 7 ದಿನಗಳ ಪೋಲಿಸ್ ಕಸ್ಟಡಿ



ಇದ್ರೀಷ್ ಪಾಷಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪುನೀತ್ ಕೆರೆಹಳ್ಳಿ ಹಾಗೂ ನಾಲ್ಕು ಆರೋಪಿಗಳಿಗೆ 7 ದಿನಗಳ ಕಾಲ ಪೋಲಿಸ್ ಕಸ್ಟಡಿಗೆ ನೀಡಿ ಕನಕಪುರ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶಿಸಿದೆ.



ಇದ್ರೀಶ್ ಪಾಷಾ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪುನೀತ್ ಕೆರೆಹಳ್ಳಿ ಮತ್ತು ನಾಲ್ವರು ಸಹಚರರನ್ನು ಇಂದು ರಾಜಸ್ಥಾನದಿಂದ ರಾಮನಗರಕ್ಕೆ ಕರೆತಂದ ಬಳಿಕ ಪೊಲೀಸರು ಆರೋಪಿಗಳನ್ನು ಕನಕಪುರ ಜೆ.ಎಂ.ಎಫ್.ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆಗೆ ಆರೋಪಿಗಳನ್ನು 7 ದಿನಗಳ ಕಾಲ ಪೋಲಿಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!