ರಾಜಕೀಯರಾಜ್ಯ

ಈಶ್ವರಪ್ಪ ನಿವೃತ್ತಿ ಬೆನ್ನಲ್ಲೇ ಜಗದೀಶ್ ಶೆಟ್ಟರ್’ಗೂ ಬಿಗ್ ಶಾಕ್



ಹುಬ್ಬಳ್ಳಿ: ಮಾಜಿ ಸಚಿವ ಕೆ. ಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೂ ಈ ಬಾರಿ ಬಿಜೆಪಿ ಟಿಕೆಟ್ ನೀಡುವುದು ಅನುಮಾನ ಎನ್ನಲಾಗಿದೆ.

“ನಿನ್ನೆಯವರೆಗೆ ನನಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿದ್ದರು. ಆದರೆ ಇಂದು ದೂರವಾಣಿ ಕರೆ ಮಾಡಿ ಬೇರೆಯವರಿಗೆ ಅವಕಾಶ ನೀಡಬೇಕು ಎಂದು ಕೋರಿದ್ದಾರೆ, ‘ನಾನು ಸ್ಪರ್ಧೆ ಮಾಡಬಾರದು ಅನ್ನೋದು ಇದ್ದಿದ್ದರೆ ಎರಡು ಮೂರು ತಿಂಗಳ ಹಿಂದೆ ನನಗೆ ಹೇಳಬೇಕಿತ್ತು ಇವತ್ತು ನನಗೆ ಹೇಳುತ್ತಾರೆ ಅಂದರೆ ಬಹಳ ಬೇಸರವಾಯಿತು’ ಎಂದು ಜಗದೀಶ್ ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ರಾಜ್ಯ ಬಿಜೆಪಿಯ ಹಿರಿಯ ಮುಖಂಡರನ್ನು ಕಡೆಗಣಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

Leave a Reply

Your email address will not be published. Required fields are marked *

error: Content is protected !!