ನನ್ನದೇನಾದರೂ ಹತ್ಯೆ ನಡೆದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆ-ಸತ್ಯಜಿತ್ ಸುರತ್ಕಲ್
ಮಂಗಳೂರು: ನನ್ನದೇನಾದರೂ ಹತ್ಯೆ ನಡೆದರೆ ಅದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆಯಾಗುತ್ತಾರೆ ಎಂದು ಹಿಂದೂ ಸಂಘಟನೆಯ ಪ್ರಮುಖ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.
ಚುನಾವಣೆ ನೆಪದಲ್ಲಿ ಸರಕಾರ ನನ್ನ ಭದ್ರತಾ ಸಿಬಂದಿಯನ್ನು ವಾಪಸ್ ಕರೆಯಿಸಿಕೊಂಡಿದೆ ಎಂದು ಆರೋಪಿಸಿ ಎ.21ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಪ್ರಾಣ ಬೆದರಿಕೆ ಇದ್ದುದರಿಂದ ಪೊಲೀಸರೇ ಭದ್ರತಾ ಸಿಬಂದಿ ಒದಗಿಸಿದ್ದರು. 16 ವರ್ಷಗಳಿಂದ ಇದ್ದ ಸಿಬಂದಿಯನ್ನು ಈಗ ಚುನಾವಣೆ ನೆಪದಲ್ಲಿ ವಾಪಸ್ ಪಡೆಯಲಾಗಿದೆ. ಈ ಬಗ್ಗೆ ಗೃಹ ಸಚಿವರು, ಸಂಘ ಪರಿವಾರದ ಪ್ರಮುಖರಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ನಾನು ಹಿಂದುತ್ವಕ್ಕಾಗಿ ರಾಷ್ಟ್ರ ಹಿತಕ್ಕಾಗಿ ನಡೆಸಿದ ಕಾರ್ಯಗಳಿಂದಾಗಿ ಬೆದರಿಕೆ ಬಂದಿತ್ತೆ ಹೊರತು ನನ್ನ ವೈಯಕ್ತಿಕ ವಿಚಾರಕ್ಕಾಗಿ ಅಲ್ಲ ಎಂದರು.
ನನ್ನ ಹತ್ಯೆಯಾದರೆ ಸಂಘ ಪರಿವಾರದ ಯಾವ ನಾಯಕರೂ ನನ್ನ ಅಂತಿಮ ದರ್ಶನಕ್ಕೆ ಬರಬಾರದು, ಶವ ಮೆರವಣಿಗೆ ಮಾಡಬಾರದು ಎಂದು ಸತ್ಯಜಿತ್ ಹೇಳಿದರು.