ಕರಾವಳಿರಾಜಕೀಯ

ಪುತ್ತೂರು: ನಾಮಪತ್ರ ಹಿಂಪಡೆದ ಜೆಡಿಎಸ್ ಬಂಡಾಯ ಅಭ್ಯರ್ಥಿ ಅಶ್ರಫ್ ಕಲ್ಲೇಗ



ಪುತ್ತೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಪುತ್ತೂರು ಜೆಡಿಎಸ್ ಅಧ್ಯಕ್ಷ ಅಶ್ರಫ್ ಕಲ್ಲೇಗರವರು ಎ.24ರಂದು ನಾಮಪತ್ರವನ್ನು ಹಿಂಪಡೆದಿದ್ದಾರೆ.

ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಹಾಗೂ ಮತ್ತಿತರ ನಾಯಕರೊಂದಿಗೆ ಆಗಮಿಸಿದ ಅವರು ನಾಮಪತ್ರ ವಾಪಸ್ ಪಡೆದುಕೊಂಡರು.

ಕಳೆದ 30 ವರ್ಷಗಳಿಂದ ಪಕ್ಷ ಸಂಘಟಿಸಿದ ನನಗೆ ಟಿಕೆಟ್ ಸಿಗಲಿಲ್ಲ ಎಂಬ ಬೇಸರದಿಂದ ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ್ದೆ. ಆದರೆ ಇದೀಗ ಪಕ್ಷದ ಪ್ರಮುಖರು ನನ್ನ ಜೊತೆ ಮಾತನಾಡಿದ್ದು ಪಕ್ಷದ ಹಿತದೃಷ್ಟಿಯಿಂದ ನಾನು ನಾಮಪತ್ರವನ್ನು ಪಡೆದಿದ್ದೇನೆ. ಮುಂದಕ್ಕೆ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಅಶ್ರಫ್ ಕಲ್ಲೇಗ ತಿಳಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಮಾತನಾಡಿ ಅಶ್ರಫ್ ಕಲ್ಲೇಗ ಅವರು ನಾಮಪತ್ರ ವಾಪಸ್ ಪಡೆಯುತ್ತಾರೆಂಬ ಭರವಸೆ ನನಗಿತ್ತು. ಅವರು ಪಕ್ಷಕ್ಕೆ ವಿರುದ್ಧವಾಗಿ ಹೋಗಲಾರದು ಎಂಬ ನಂಬಿಕೆಯೂ ಇತ್ತು. ಅವರದೇ ನೇತೃತ್ವದಲ್ಲಿ ಈ ಚುನಾವಣೆಯನ್ನು ಎದುರಿಸಿ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ

Leave a Reply

Your email address will not be published. Required fields are marked *

error: Content is protected !!