ಕರಾವಳಿರಾಜಕೀಯ

ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಸನ್ಮಾನ

ದ ಕ ಜಿಲ್ಲೆ ಮತ್ತು ಉಡುಪಿ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿ ಕೃಷ್ಣಪ್ಪರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ ಹಾಜಿ ಕೆಎಸ್ ಮಹಮ್ಮದ್ ಮಸೂದ್ ಚುನಾವಣಾ ಪ್ರಚಾರಕ್ಕಾಗಿ ಸುಳ್ಯಕ್ಕೆ ಆಗಮಿಸಿದ ಸಂದರ್ಭದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ಸಂಘಟನಾ ಕಾರ್ಯದರ್ಶಿ ಎಸ್. ಸಂಶುದ್ದೀನ್ ರವರ ಆರಂಬೂರು ನಿವಾಸದಲ್ಲಿ ಜಿ ಕೃಷ್ಣಪ್ಪರವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರ ಟಿ. ಎಂ ಶಹೀದ್, ಮುಸ್ಲಿಂ ಸೆಂಟ್ರಲ್ ಕಮಿಟಿ ಸಂಘಟನಾ ಕಾರ್ಯದರ್ಶಿ ಸಂಸುದ್ದೀನ್, ಕೆಪಿಸಿಸಿ ಅಲ್ಪ ಸಂಖ್ಯಾತರ ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ,ಸೆಂಟ್ರಲ್ ಕಮಿಟಿ ಪದಾಧಿಕಾರಿಗಳಾದ ಇಬ್ರಾಹಿಂ ಕೊಡಿಚ್ಚಾಲ್,ಹನೀಫ ಹಾಜಿ, ಸಿ. ಎಂ. ಹನೀಫ್,ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳಾದ ಇಸಾಕ್ ಹಾಜಿ ಪಾಜಪ್ಪಳ್ಳ,ಕರ್ನಾಟಕ ರಾಜ್ಯ ಸರ್ಕಾರದ ಕೆಪೆಕ್ ಮಾಜಿ ಸದಸ್ಯ ಪಿ. ಎ. ಮಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!