ರಾಜಕೀಯರಾಜ್ಯ

ನನಗೆ ಸೋತಿರೋ ದುಃಖ ಇಲ್ಲ ಆದರೆ… ಜಗದೀಶ್ ಶೆಟ್ಟರ್ ಹೇಳಿದ್ದೇನೆ ಗೊತ್ತಾ



ರಾಜ್ಯದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಕಾಂಗ್ರೆಸ್ ಗೆ ಬೆಂಬಲ ನೀಡಿರುವುದ ಎಲ್ಲರಿಗೂ ಧನ್ಯವಾದ ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ನನ್ನನ್ನು ಟಾರ್ಗೆಟ್ ಮಾಡಿದವರೇ ರಾಜ್ಯದಲ್ಲಿ ಬಿಜೆಪಿ‌ ಸೋಲಿಸಿದರು’ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.



ದೆಹಲಿ, ರಾಜ್ಯ ನಾಯಕರು ನನಗೆ ಟಿಕೆಟ್ ಕೊಡಬಾರದು ಎಂದು ಷಡ್ಯಂತ್ರ ಮಾಡಿದ್ದರು. ನನಗೆ ಸೋತಿರೋ ದುಃಖ ಇಲ್ಲ ಎಂದು ಅವರು ಹೇಳಿದ್ದಾರೆ.

‘ನಾನು ಸ್ವಾಭಿಮಾನಕ್ಕಾಗಿ ಚುನಾವಣೆಗೆ ನಿಂತಿದ್ದೆ,ಆದರೆ ಸೋತಿದ್ದೇನೆ. ಒಬ್ಬರಿಗೆ ಪೆಟ್ಟು ಕೊಡೋಕೆ ಹೋಗಿ‌ ಇಡೀ ಪಕ್ಷಕ್ಕೆ ಪೆಟ್ಟು ಕೊಟ್ಟರು. ಅವರ ಷಡ್ಯಂತ್ರಕ್ಕಾಗಿ ಇಡೀ ರಾಜ್ಯಕ್ಕೆ ಪೆಟ್ಟು ಕೊಟ್ಟರು’.
ನಾನು ಇನ್ನೂ ಕಾಂಗ್ರೆಸ್ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದು ಇದೇ ವೇಳೆ ಶೆಟ್ಟರ್ ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

error: Content is protected !!