ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ರಮಾನಾಥ ರೈ
ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿ ಸೋಲನುಭವಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ ರಮಾನಾಥ ರೈ ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿರುವುದಾಗಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.