ಕ್ರೈಂಜಿಲ್ಲೆ

200 ಯುನಿಟ್ ಫ್ರೀ ಕರೆಂಟ್ ಎಫೆಕ್ಟ್: ವಿದ್ಯುತ್ ಬಿಲ್ ವಸೂಲಿಗೆ ಬಂದ ಲೈನ್’ಮ್ಯಾನ್ ಗೆ ಚಪ್ಪಲಿಯಿಂದ ಹೊಡೆದ ಭೂಪ



200 ಯುನಿಟ್ ಕರೆಂಟ್ ಫ್ರೀ ಕೊಡ್ತೀವಿ ಅಂತ ಕಾಂಗ್ರೆಸ್ ಸರ್ಕಾರ ಹೇಳಿದ್ದು, ಜನ ಇದನ್ನೇ ನೆಪ ಮಾಡಿಕೊಂಡು ಕರೆಂಟ್ ಬಿಲ್ ಕಟ್ಟಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ.
ಇದೀಗ ಕೊಪ್ಪಳದಲ್ಲಿ ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಬಂದವರ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಕುಕನಪಳ್ಳಿ ಗ್ರಾಮದ ಚಂದ್ರಶೇಖರಯ್ಯ ಎಂಬವರು ಕಳೆದ ಆರು ತಿಂಗಳಿನಿಂದ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಲೈನ್ ಮ್ಯಾನ್ ಮಂಜುನಾಥ ಬಿಲ್ ವಸೂಲಾತಿಗೆ ತೆರಳಿದ್ದರು.
ಈ ವೇಳೆ ವಿದ್ಯುತ್ ಬಿಲ್ ಕಟ್ಟಲ್ಲ, ಕರೆಂಟ್ ಫ್ರೀ ಎಂದು ಹೇಳಿದ್ದಾರೆ, ಅಲ್ಲದೆ ಅವಾಚ್ಯ ಪದಗಳಿಂದ ನಿಂದಿಸಿ ಚಪ್ಪಲಿಯಿಂದ ಹಲ್ಲೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!