ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳ್ತಂಗಡಿ ಶಾಸಕ ಪೂಂಜಾ ವಿರುದ್ಧ ಕಾರ್ಕಳದಲ್ಲೂ ಪೊಲೀಸ್ ದೂರು
ಕಾರ್ಕಳ : ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ಪಕ್ಷದ ವತಿಯಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದುಗಳ ಕೊಲೆ ಮಾಡಿದವರೆಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು ಪೂಂಜಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಮೇ 25ರಂದು ಕಾಂಗ್ರೇಸ್ ನಿಯೋಗ ದೂರು ದಾಖಲಿಸಿದೆ.

ಶಾಸಕ ಪೂಂಜಾ ಆಡಿದ ಮಾತುಗಳು ಸತ್ಯಕ್ಕೆ ದೂರವಾಗಿದ್ದು ವೈಯಕ್ತಿಕ ನಿಂದನೆಯಿಂದ ಕೂಡಿದೆ, ಅವರ ಮಾನಹಾನಿ ಮಾಡಿದ ಶಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾರ್ಕಳ ಕಾಂಗ್ರೆಸ್ ನಿಯೋಗ ದೂರಿನಲ್ಲಿ ತಿಳಿಸಿದೆ.
ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಪುರಸಭಾ ಸದಸ್ಯರಾದ ಶುಭದ ರಾವ್, ಸೊಮನಾಥ್ ನಾಯ್ಕ್, ಮಾಜಿ ಸದಸ್ಯ ವಿವೇಕಾನಂದ ಶೆಣೈ, ನಗರ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಕಾಂತಿ ಶೆಟ್ಟಿ, ಸುನೀಲ್ ಭಂಡಾರಿ, ಬ್ರಯಾನ್ ಪಯಾಸ್ ಮತ್ತಿತರರು ಉಪಸ್ಥಿತರಿದ್ದರು.