ಕರಾವಳಿ

ಸುಬ್ರಹ್ಮಣ್ಯ:ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಗಾಯ-ಮೂವರು ವಿಧ್ಯಾರ್ಥಿನಿಯರು ಪುತ್ತೂರು ಆಸ್ಪತ್ರೆಗೆ



ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂರು ಜನ ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ಇದೀಗ ಸಂಜೆ ನಡೆದಿದೆ.

ಕಾಲೇಜು ಬಿಟ್ಟು ಮನೆಗೆ ತೆರಳುತಿದ್ದ ವಿದ್ಯಾರ್ಥಿನಿಯರು ವಲ್ಲೀಶ ಸಭಾಭವನದಲ್ಲಿ ಎದುರು ಭಾಗ, ಕಾಲೇಜು ತಿರುವಿನ ಸ್ವಲ್ಪ ಮುಂಭಾಗ 7-8 ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಪೇಟೆ ಕಡೆ ತೆರಳುತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿರುವುದಾಗಿ ತಿಳಿದು ಬಂದಿದೆ.

ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು ಅವರುಗಳನ್ನು ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಇನ್ನುಳಿದ 3- 4 ವಿದ್ಯಾರ್ಥಿಗಳಿಗೂ ಸಣ್ಣ ಪುಟ್ಟ ಗಾಯ ಆಗಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!