ಕರಾವಳಿ

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿನಿ ಸೌಜನ್ಯ ರೇಪ್ & ಮರ್ಡರ್ ಪ್ರಕರಣ: ಸಿಬಿಐ ವಿಶೇಷ ಕೋರ್ಟ್’ನಿಂದ ಜೂನ್ 16ರಂದು ತೀರ್ಪು ಪ್ರಕಟ

ಬೆಳ್ತಂಗಡಿ: ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17. ವ ) ಅವರನ್ನು ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ.


ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಎರಡನೇ ಪುತ್ರಿ ಸೌಜನ್ಯ (17) ಕಾಲೇಜು ಮುಗಿಸಿ ಮನೆಗೆ ವಾಪಸ್ ಹೋಗುವಾಗ 9-10-2012 ರಂದು ಸಂಜೆ ನಾಪತ್ತೆಯಾಗಿದ್ದಳು.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
10-10-2012 ರಂದು ರಾತ್ರಿ 10:30 ಕ್ಕೆ ಧರ್ಮಸ್ಥಳ ಮಣ್ಣಸಂಖದಲ್ಲಿ ಸೌಜನ್ಯ ಶವ ಪತ್ತೆಯಾಗಿತ್ತು.ಬಳಿಕ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ರೇಪ್ & ಮರ್ಡರ್ ಪ್ರಕರಣ ದಾಖಲಾಗಿತ್ತು.

11-10-2012 ರಂದು ಪ್ರಕರಣದ ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಹೌಸಿಂಗ್ ಕಾಲೋನಿಯ ಸಂತೋಷ್ ರಾವ್ (38) ಬಾಹುಬಲಿ ಬೆಟ್ಟದ ಗುಡ್ಡದಲ್ಲಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನೆ ತೀವ್ರವಾಗಿದ್ದರಿಂದ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ನೀಡಿತ್ತು. ಪ್ರಕರಣ ನಡೆದು 11 ವರ್ಷಗಳ ಬಳಿಕ ಜೂನ್ 16ರಂದು ಪ್ರಕರಣ ತೀರ್ಪು ಪ್ರಕಟವಾಗಲಿದೆ.

Leave a Reply

Your email address will not be published. Required fields are marked *

error: Content is protected !!