ರಾಜ್ಯ

ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ನಿಂದ ಬಿದ್ದ ಯುವಕ



ಬೈಕ್ ಸವಾರನೊಬ್ಬ ಕರಡಿ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಅಪಘಾತಕ್ಕೀಡಾಗಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಹನುಮಂತಪುರದಲ್ಲಿ ನಡೆದಿದೆ. ಹನುಮಂತಪುರದ ಮೂಲದ ನಿವಾಸಿ ಕೃಷ್ಣ (33.ವ) ಎಂಬುವವರು ತಮ್ಮ ಊರಿಗೆ ಹಿಂದಿರುಗುತ್ತಿದ್ದಾಗ ಕರಡಿ ಅಡ್ಡ ಬಂದಿದೆ ಎನ್ನಲಾಗಿದೆ. ಇದರಿಂದ ಗಾಬರಿಗೊಂಡ ಕೃಷ್ಣ ಅದರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ನಿಂದ ಬಿದ್ದಿದ್ದಾರೆ.

ಇದರಿಂದ ಕೃಷ್ಣ ಅವರಿಗೆ ಗಾಯಗಳಾಗಿವೆ. ನಂತರ ಸ್ಥಳೀಯರ ಸಹಾಯದಿಂದ ಕೃಷ್ಣ ಮಧುಗಿರಿ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!