ರಾಜಕೀಯರಾಜ್ಯ

ಶಾಸಕ ಬಸನಗೌಡ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಎಂ.ಬಿ.ಪಾಟೀಲ್



ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟ್ವೀಟ್ ಗೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಮರೆಯಬಾರದು ಎಂದು ಟ್ವೀಟ್ ಮಾಡಿ ಎಂ ಬಿ ಪಾಟೀಲರನ್ನು ಕುಟುಕಿದ್ದರು.

ಜೈಲಿಗೆಕಳಿಸ್ತೀವಿ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲಾ ಸಲ್ಲದು ಎಂದು ಬಿಜೆಪಿ ಶಾಸಕ ಯತ್ನಾಳ ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪಾಟೀಲ್, ಕಳೆದ 4 ವರ್ಷಗಳ ಕಾಲ ಯೋಗಿ ಮಾಡೆಲ್, ಬುಲ್ಡೋಜರ್ ಮಾಡೆಲ್, ಎನ್ಕೌಂಟರ್ ಮಾಡೆಲ್, ಎಂದೆಲ್ಲಾ ನೀವು ಅಣಿಮುತ್ತು ಉದುರಿಸುವಾಗ ಪ್ರಜಾಪ್ರಭುತ್ವ ಎಲ್ಲಿ ಹೋಗಿತ್ತು ಎಂದು ಕುಟುಕಿದ್ದಾರೆ.
ಸತತವಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ನಿಮ್ಮಿಂದ ಪಾಠ ಕಲಿಯಬೇಕಿಲ್ಲ ಎಂದು ಬಿಜೆಪಿ ಶಾಸಕ ಯತ್ನಾಳಗೆ ಸಚಿವ ಪಾಟೀಲ ತಿರುಗೇಟು ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!