ರಾಜಕೀಯರಾಜ್ಯ

ಕಾಂಗ್ರೆಸ್’ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿಗೆ ಬಂದು 2 ಬಾರಿ ಸೋತೆ: ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ



ಕಾಂಗ್ರೆಸ್’ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿಗೆ ಬಂದು 2 ಬಾರಿ ಸೋತೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿಗಳ ಸಭೆಯಲ್ಲಿ ಎಂಟಿಬಿ ನಾಗರಾಜ್ ಹೇಳಿಕೊಂಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಬಿಜೆಪಿ ಸೇರಿದ ನಂತರ 2 ಬಾರಿ ಸ್ಪರ್ಧಿಸಿ 2 ಬಾರಿಯೂ ಸೋತಿದ್ದೇನೆ. ಡಾ.ಕೆ.ಸುಧಾಕರ್ ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ. ಉಸ್ತುವಾರಿ ಸ್ಥಾನವನ್ನು ಡಾ.ಕೆ.ಸುಧಾಕರ್ ಸಮರ್ಥವಾಗಿ ನಿಭಾಯಿಸಲಿಲ್ಲ. ನನ್ನ, ಚಿಂತಾಮಣಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಡಾ.ಕೆ.ಸುಧಾಕರ್ ಕಾರಣ ಎಂದು ಆರೋಪಿಸಿದರು.

40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಕೌಂಟರ್ ಅಟ್ಯಾಕ್ ಮಾಡಲಿಲ್ಲ. ನಾವು ಕೇವಲ ಸಿದ್ದರಾಮಯ್ಯಗೆ ಮಾತ್ರ ಬೈದೆವು. ಚುನಾವಣೆ ವೇಳೆ ಅಕ್ಕಿ ವಿತರಣೆ ಕಡಿಮೆ ಮಾಡಿದ್ದು ಪ್ರಮುಖ ಕಾರಣ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಸಚಿವರು ಗಣನೆಗೆ ತೆಗೆದುಕೊಳ್ಳಲಿಲ್ಲ. ಕಾರ್ಯಕರ್ತರ ಆಗುಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲೇ ಇಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!