ಕರಾವಳಿ

ಸುಳ್ಯ: ಅಡ್ತಲೆ ಅರಮನೆಗಯ ಸೇತುವೆ ನಿರ್ಮಾಣದ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಸುಳ್ಯ ಶಾಸಕರಿಗೆ ಮನವಿ

ಮನವಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕರು



ಸುಳ್ಯ ಅಡ್ತಲೆ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಹಾಗು ರಸ್ತೆ ಉದ್ಘಾಟನೆಗೆ ಆಗಮಿಸಿದ ಶಾಸಕಿ ಭಾಗೀರಥಿ ಮುರುಳ್ಯ ರವರಿಗೆ ಅಂಬೇಡ್ಕರ್ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ಮನವಿ ನೀಡಿ ಈ ಭಾಗದ ಅರಮನೆಗಯಾ ಸೇತುವೆ ನಿರ್ಮಿಸಿ ಕೊಡುವಂತೆ ಕೇಳಿಕೊಂಡಿದ್ದಾರೆ.

ಮನವಿಗೆ ಸ್ಪಂದಿಸಿರುವ ಶಾಸಕರು ಮುಂದಿನ ದಿನಗಳಲ್ಲಿ ಬರುವ ಅನುದಾನಗಳಲ್ಲಿ ಪ್ರಥಮ ಆದ್ಯತೆಯನ್ನು ನೀಡಿ ಸೇತುವೆ ನಿರ್ಮಿಸಿ ಕೊಡುವುದಾಗಿ ಭರವಸೆಯನ್ನು ನೀಡಿರುತ್ತಾರೆ ಎಂದು ತಿಳಿದುಬಂದಿದೆ.
ಮಳೆಗಾಲದಲ್ಲಿ ತತ್ಕಾಲಿಕವಾಗಿ ದುರಸ್ಥಿ ಕಾರ್ಯವನ್ನು ಪಂಚಾಯತ್ ಮುಖಾಂತರ ಮಾಡುವುದಾಗಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಕೇಶವ ಅಡ್ತಲೆಯವರು ಈ ವೇಳೆ ತಿಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಸುಳ್ಯ ಬಿ. ಜೆ. ಪಿ. ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ಕೇಶವ ಅಡ್ತಲೆ,ಮರ್ಕಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವಿಂದ ಅಳವುಪಾರೆ,
ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮಟ್ಟೆ,ಶೇಖರ ಜೋಡುಪನ್ನೆ,ವಿನಯ ಬೆದ್ರುಪಣೆ,ಮತ್ತು ಅಂಬೇಡ್ಕರ್ ರಕ್ಷಣಾ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!