ರಾಜ್ಯ

ಇಂದು ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಚಾಲನೆ

ಬೆಂಗಳೂರು: ರಾಜ್ಯಾದ್ಯಂತ ಏಕಕಾಲದಲ್ಲಿ ಶಕ್ತಿ ಯೋಜನೆಗೆ ಇಂದು (ಜೂ.11) ಚಾಲನೆ ದೊರೆಯಲಿದೆ. ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಸಚಿವರು, ಶಾಸಕರು ಯೋಜನೆಗೆ ಚಾಲನೆ ನೀಡಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಚಾಲನೆ ನೀಡಲಾಗುತ್ತದೆ. ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಆಯಾ ಜಿಲ್ಲೆಯ ಸಚಿವರು, ಶಾಸಕರು ಯೋಜನೆಗೆ ಚಾಲನೆ ನೀಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆ ಲೋಗೋ ಅನಾವರಣಗೊಳಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಜತೆಗಿರಲಿದ್ದಾರೆ. ನಂತರ ಸಿದ್ದರಾಮಯ್ಯ ಅವರು ಬಸ್ನಲ್ಲೇ ಸಿಟಿ ರೌಂಡ್ಸ್ ಹಾಕಲಿದ್ದಾರೆ. ವಿಧಾನ ಸೌಧ ಒಂದು ರೌಂಡ್, ಮೆಜೆಸ್ಟಿಕ್ ಅಥವಾ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬಿಎಂಟಿಸಿಯಲ್ಲಿ ಒಂದು ರೌಂಡ್ ಹೋಗಲಿದ್ದಾರೆ.

ಮಧ್ಯಾಹ್ನ 1 ಗಂಟೆಯ ನಂತ್ರ ಬಿಎಂಟಿಸಿ, ಕೆಎಸ್ಆರ್ಟಿಸಿ, ಎನ್ ಡಬ್ಲ್ಯೂಆರ್ಟಿಸಿ, ಕೆಕೆಆರ್ಟಿಸಿ ಬಸ್ಗಳಲ್ಲಿ‌ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತದೆ.

Leave a Reply

Your email address will not be published. Required fields are marked *

error: Content is protected !!